ಮಂಗಳೂರು, ಅ.03 : :ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.22ರಂದು ನವರಾತ್ರಿಯ ಮಂಗಳೂರು ದಸರಾ ಆರಂಭಗೊಂಡಿದ್ದು, ಸೆ.2, ಗುರುವಾರ 4 ಗಂಟೆಗೆ ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ಶೋಭಾಯಾತ್ರೆಗೆ ಚಾಲನೆ ದೊರೆಯಿತು.
ಶೋಭಾಯಾತ್ರೆಗೆ ಕೇಂದ್ರದ ಮಾಜಿ ವಿತ್ತ ಸಚಿವ ಕುದ್ರೋಳಿ ಶ್ರೀ ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ಅವರ ಮಾರ್ಗದರ್ಶನದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಶೋಭಾಯಾತ್ರೆಯು ಕ್ಷೇತ್ರದಿಂದ ಹೊರಟು ನಗರ ಪ್ರದಕ್ಷಿಣೆ ಯ ಬಳಿಕ ಚಿತ್ರಾ ಟಾಕೀಸ್ ಅಳಕೆಯಾಗಿ ಮತ್ತೆ ಶ್ರೀಕ್ಷೇತ್ರಕ್ಕೆ ಬಂದು ವಿಸರ್ಜನೆಗೊಂಡಿತು.
